Site icon Suddi Belthangady

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಲ್ಲಿ ವನಮಹೋತ್ಸವ ಹಾಗೂ ಆರೋಗ್ಯ ಬಗ್ಗೆ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್, ಅಕ್ಷಯ ಮಹಾಸಂಘ ಶಿರಾಡಿ, ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ, ಗ್ರಾಮ ಪಂಚಾಯತ್ ಶಿರಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಡಿ, ಅರಣ್ಯ ಇಲಾಖೆ ಗುಂಡ್ಯ ಹಾಗೂ ಶಿರಾಡಿ ಇವರ ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ಆರೋಗ್ಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಜು.18ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಡಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಮಹಾಸಂಘ ಅಧ್ಯಕ್ಷೆ ವಿದ್ಯಾ ರವರು ವಹಿಸಿದ್ದರು. ಅರಣ್ಯ ಇಲಾಖೆ ಗುಂಡ್ಯ ಇಲ್ಲಿನ ಗಾರ್ಡ್ ಆಗಿರುವ ಚಂದ್ರು ಇವರು ಹಣ್ಣಿನ ಗಿಡವನ್ನು ವಿತರಿಸುವ ಮೂಲಕ ಉದ್ಘಾಟನೆಯನ್ನು ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಚಂದ್ರಶೇಖರ್, ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಡಿ ಇವರು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಸೈಂಟ್ ಸೆಬಾಸ್ಟಿಯನ್ ಚರ್ಚ್ ಶಿರಾಡಿ ಇಲ್ಲಿನ ಧರ್ಮಗುರುಗಳು ವಂ.ಫಾ. ಜೋಸೆಫ್ ಇವರು ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅರಣ್ಯ ಇಲಾಖೆಯ ಗಾರ್ಡ್ ಆಗಿರುವ ನಾಗರಾಜ್ ರವರು ಉಪಸ್ಥಿತರಿದ್ದರು. ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ವಠಾರದಲ್ಲಿ ಹಣ್ಣಿನ ಗಿಡವನ್ನು ನೆಡಲಾಯಿತು.

ಕಿರಣ್ ಮಹಿಳಾ ಒಕ್ಕೂಟದ ಅಧ್ಯಕ್ಷೆ ಡೈಸಿ ಜೋಯ್ ಎಲ್ಲರನ್ನು ಸ್ವಾಗತಿಸಿದರು. ಅಕ್ಷಯ ಮಹಾಸಂಘ ಕಾರ್ಯದರ್ಶಿ ದೀಪ್ತಿ ವಂದಿಸಿದರು. ಯೋಜನಾ ಸಂಯೋಜಕಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.

Exit mobile version