ರಾಣಿಬೆನ್ನೂರಿನಲ್ಲಿ ನಡೆಯುವ ಗುರು ಪೂರ್ಣಿಮಾ ಕಾರ್ಯಕ್ರಮದಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಭಾಗಿ

0

ಬಳಂಜ: ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜುಲೈ 20ರಂದು ನಡೆಯುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದ ಶ್ರೀ ಗುರುಪೂರ್ಣಿಮಾ ಉತ್ಸವದಲ್ಲಿ ದೇವರ ಮೆರವಣಿಗೆಯಲ್ಲಿ ಕುಣಿತ ಭಜನಾ ಕಾರ್ಯಕ್ರಮ ನೀಡಲು ತೆರಳಿದೆ.

ಸಮಾಜ ಸೇವಕ ಹರೀಶ್ ವೈ ಚಂದ್ರಮರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಮಂಡಳಿಯು ಈಗಾಗಲೇ ಇನ್ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು ಹೊರ ರಾಜ್ಯ ಮಹಾರಾಷ್ಟ್ರದಲ್ಲೂ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.

ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ.ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here