Site icon Suddi Belthangady

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಮಂಡಲದ ಕಾರ್ಯಕಾರಣಿ ಸಭೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಮಂಡಲದ ಕಾರ್ಯಕಾರಣಿ ಸಭೆಯು ಜುಲೈ 21ರಂದು ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು.ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಮಂಡಲ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಸಾವ್ಯ, ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಹೇಮಂತ್ ಶೆಟ್ಟಿ, ಹಾಗೂ ಮಂಡಲ ಪದಾಧಿಕಾರಿಗಳು, ಸದಸ್ಯರು ಮಹಾಶಕ್ತಿ ಕೇಂದ್ರ ಸಂಚಾಲಕರು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Exit mobile version