ಸ್ವಾತಿ ಸೂರಜ್ ನೆಲ್ಲಿತ್ತಾಯ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

0

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ಸೂರಜ್ ನೆಲ್ಲಿತ್ತಾಯ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆಗೊಂಡಿತು.

ಮಕ್ಕಳಿಗಾಗಿಯೇ 26 ಗೀತೆಗಳನ್ನು ಒಳಗೊಂಡ ಈ ಪುಸ್ತಕವನ್ನು ಕರ್ನಾಟಕದ ಮುದ್ದು ಮಕ್ಕಳಿಗೆ ಅರ್ಪಿಸಿದರು.ಮುನ್ನುಡಿಯನ್ನು ದಿನೇಶ್ ಹೊಳ್ಳ ರವರು ಬರೆದಿದ್ದು, ಲ|ನಿತ್ಯಾನಂದ ನಾವರ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಿಜಯ್ ಕುಮಾರ್ ಜೈನ್, ಭುಜಬಲಿ, ಲ|ನಿತ್ಯಾನಂದ, ಪ್ರೀತಮ್. ಡಿ, ಶ್ರೀನಿವಾಸ್ ರಾವ್,ಸಂಪತ್ ಬಿ ಸುವರ್ಣ, ಪಿ ಹೆಚ್.ಪ್ರಕಾಶ್ ಶೆಟ್ಟಿ, ರಂಜಿತ್ ಎಚ್ ಡಿ, ದೀಪಾಲಿ ಡೊಂಗ್ರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here