Site icon Suddi Belthangady

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್ ಸ್ಪರ್ಧೆ-ತೃತೀಯ ಸ್ಥಾನ ಪಡೆದು ಮಿಂಚಿದ ಬೆಳ್ತಂಗಡಿಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿoಹ ನಾಯಕ್ ತೃತೀಯ ಸ್ಥಾನ ಪಡೆದಿದ್ದಾರೆ. ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ,ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.ಈವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಉಪಸ್ಥಿತರಿದ್ದರು.

Exit mobile version