ಕೇಂದ್ರ ಬಜೆಟ್ ನಿರಾಶದಾಯಕ: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಿರಾಶದಾಯಕ. ಇದು ಪೇಪರ್‌ನಲ್ಲಿ ಮಾತ್ರ ಘೋಷಣೆಯ ಆಯವ್ಯಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಟೀಕಿಸಿದ್ದಾರೆ.

ನಿರ್ಮಲಾ ಕರ್ನಾಟಕದಿಂದ ರಾಜ್ಯಸಭೆಗೆ ಹೋಗಿದ್ದರೂ ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿದ್ದಾರೆ. ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಎನ್‌ಡಿಎ ಮೈತ್ರಿಕೂಟದ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಬಹುಕೋಟಿ ಅನುದಾನ ಕೊಡಲಾಗಿದೆ. ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್. ರಾಜ್ಯಕ್ಕೆ ಮತ್ತೆ ಮಲತಾಯಿ ಧೋರಣೆ ಎಸಗಲಾಗಿದ್ದು, ರಾಜ್ಯದ ಬಿಜೆಪಿ ಸಂಸದರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಟೀಕಿಸುತ್ತಿದ್ದ ಬಿಜೆಪಿಯ ನಾಯಕರು ಈಗ ಅದನ್ನು ಭಟ್ಟಿ ಇಳಿಸಿ ಅವರ ಬಜೆಟ್‌ನಲ್ಲಿ ಸೇರಿಸಿದ್ದಾರೆ ಎಂದು ರಕ್ಷಿತ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here