Site icon Suddi Belthangady

ಬ್ರಹ್ಮಾನಂದ ಶ್ರೀಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವ

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಈ ವರ್ಷದ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವತಿಯಿಂದ ಗೌರವಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಹಾಗೂ ಇತರ ಗಣ್ಯರು ಜೊತೆಗಿದ್ದರು.

Exit mobile version