Site icon Suddi Belthangady

ಗಾಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗಾಳಿ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.

ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿದರು.ಅವರು ಅಲ್ಲಿ ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ಮರಗಳ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.

ಜೊತೆಯಲ್ಲಿ ತಾಲ್ಲೂಕಿನ ಅಧಿಕಾರಿಗಳನ್ನು, ಪಂಚಾಯಿತಿಯ ಸಂಬಂದಪಟ್ಟ ಅಧಿಕಾರಿಗಳನ್ನು, ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಕರೆತಂದು ಸೂಕ್ತ ಪರಿಹಾರಕ್ಕೆ ಒತ್ತಾಯ ಮಾಡಿದರು.

Exit mobile version