Site icon Suddi Belthangady

ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಭೆ, ಪ್ರತಿಭಾ ಪುರಸ್ಕಾರ

ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಭೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು.27ರಂದು ನಡೆಯಿತು.

ಸಂಚಾಲಕ ವಂ.ಫಾ.ಅಬೆಲ್ ಲೋಬೊ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದರು. ಸಂಪನ್ಮೂಲ ವ್ಯಕ್ತಿ ಕೊಕ್ರಾಡಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನೋರ್ಬರ್ಟ್ ಮಾರ್ಟಿಸ್ ಭಾಗವಹಿಸಿ ಹಿತ ವಾಚನ ಹೇಳಿದರು. ಶಾಲಾ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೊ, ಕಾಲೇಜು ಮಂಡಳಿ ಸದಸ್ಯರು ಸ್ಟ್ಯಾನಿ ಪಿಂಟೋ, ಅನಿತಾ ಮೋನಿಸ್ ಉಪಸ್ಥಿತರಿದ್ದರು ಉಪನ್ಯಾಸಕಿ ಪ್ರಜ್ವಲಿ ಸ್ವಾಗತಿಸಿದರು. ವಂದನಾ ಜೋಶಿ ವರದಿ ಮಂಡಿಸಿದರು.

ಕಳೆದ ದ್ವಿತೀಯ ಪಿ.ಯು.ಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಅಸ್ಲಾಮಿಯ, ಆಯಿಷಾ, ಜೆರಿನ್, ಸ್ಯಾಮ್ಸನ್ ಡಿಸೋಜ, ರಮೀಜಾ, ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.

ಕಾಲೇಜಿಗೆ ಅತೀ ಹೆಚ್ಚು ಅಂಕ ಗಳಿಸಿದ ಅಸ್ಲಾಮಿಯ ಅನಿಸಿಕೆ ವ್ಯಕ್ತ ಪಡಿಸಿದರು. ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪನ್ಯಾಸಕ ಅರುಣ್ ಕಾರ್ಯಕ್ರಮ ನಿರೂಪಿಸಿದರು.

Exit mobile version