Site icon Suddi Belthangady

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಕಕ್ಯಪದವು: ಅದಮ್ಯ ಸಾಹಸ, ಅಪ್ರತಿಮ ಶೌರ್ಯ ದೇಶಭಕ್ತಿಯ ಸ್ಫೂರ್ತಿಯೊಂದಿಗೆ ಶತ್ರುಗಳನ್ನು ಸದೆ ಬಡೆದು, ಭಾರತಾಂಬೆಯ ಘನತೆ ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ಧದ ವೀರರನ್ನು ಸ್ಮರಿಸುವ ಸಲುವಾಗಿ ಜು.26ರಂದು “ಯೋಧ ನಮನ” ಕಾರ್ಯಕ್ರಮವನ್ನು ಆಚರಿಸಲಾಯಿತು.ದೇಶಕ್ಕಾಗಿ ತ್ಯಾಗ ಬಲಿದಾನಗೈದ ವೀರ ಯೋಧರಿಗೆ ದೀಪಾಲಂಕಾರದ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಾದ ವರ್ಷ, ಸಾಬೀತ್, ಗೌತಮಿ ಹಾಗೂ ಶಶಾಂಕ್ ಕಾರ್ಗಿಲ್ ವಿಜಯೋತ್ಸವದ ಕುರಿತು ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ಮುಖ್ಯಶಿಕ್ಷಕಿ ವಿಜಯ ಕೆ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್. ಹಾಗೂ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾನೀಬಾ ಕಾರ್ಯಕ್ರಮ ನಿರೂಪಿಸಿದರು.

Exit mobile version