Site icon Suddi Belthangady

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ

ಬೆಳ್ತಂಗಡಿ: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಜುಲೈ 26ರಂದು ರಾತ್ರಿ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗದ ಸ್ಮಾರಕದವರೆಗೆ ನಡೆಯಿತು.

ನಿವೃತ್ತ ಯೋಧ ಸುಬೇದರ್ ಶಿವಕುಮಾರ್ ಭಾರತ ಮಾತೆಗೆ ಪುಷ್ಪರ್ಚನೆ ಸಲ್ಲಿಸಿ, ಕಾರ್ಗಿಲ್ ಯುದ್ಧದ ಕ್ಷಣದಲ್ಲಿ ಭಾರತ ಗೆಲುವು ಸಾಧಿಸಿದ ಕ್ಷಣವನ್ನು ನೆನಪಿಸಿದರು.ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷ ಸಂದಿರುವ ಬಗ್ಗೆ ಮಾತಾಡಿ ದೇಶಕ್ಕಾಗಿ ಬಲಿದಾನ ಮಾಡಿದ ವೀರ ಯೋಧರಿಗೆ ನಮನ ಸಲ್ಲಿಸಿ ಕಾರ್ಯಕ್ರಮದ ಯಶಶ್ವಿಗೆ ಸಹಕರಿಸಿದ ರಾಷ್ಟ್ರಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಪ್ರಭಾರಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವರ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮoಜ, ತಾಲೂಕು ಮಾಜ್ದುರ್ ಅಧ್ಯಕ್ಷ ವಕೀಲ ಉದಯ ಬಿ.ಕೆ, ಯುವ ವಕೀಲ ಯತೀಶ್ ಪಣೆಕ್ಕರ, ಯುವಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ರಾಷ್ಟ್ರ ಪ್ರೇಮಿಗಳು ಉಪಸ್ಥಿತರಿದ್ದರು.

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ ಸ್ವಾಗತಿಸಿ, ಜಗದೀಶ್ ಕನ್ನಾಜೆ ಧನ್ಯವಾದ ಸಮರ್ಪಿಸಿದರು.

Exit mobile version