ಕನ್ಯಾಡಿ (ಜಯನಗರ): ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಕನ್ಯಾಡಿ: ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2023-24ನೇ ಸಾಲಿನ ಸಾಮಾನ್ಯ ಸಭೆಯು ಜು.29ರಂದು ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷರಾದ ಸೌಮ್ಯಲತಾ ಜಯಂತ ಗೌಡರವರ ಅಧ್ಯಕ್ಷತೆಯಲ್ಲಿ ಜರಗಿತು.

ದ.ಕ ಹಾಲು ಒಕ್ಕೂಟ ಮಂಗಳೂರು ಉಪವ್ಯವಸ್ಥಾಪಕ ಡಾ.ಡಿ.ಆರ್ ಸತೀಶ್ ರಾವ್ ಭಾಗವಹಿಸಿ ಮಾತನಾಡಿ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಸವಿತಾ, ನಿರ್ದೇಶಕರಾದ ವಸಂತಿ ಕಾರಿಂಜ, ರತ್ನಾವತಿ ಮಾಳಿಗೆ ಮನೆ, ಸುನಂದ, ಪ್ರೇಮಾ, ಜಲಜ ಮಾಳಿಗೆ ಮನೆ, ಲತಾ, ದೇವಕಿ, ಗೀತಾ ಕೇರಿಮಾರು, ಗೀತಾ ವಿ.ನಾಯ್ಕ, ಮಲ್ಲಿಕಾ, ಕಮಲ, ಪದ ನಿಮಿತ್ತ ನಿರ್ದೇಶಕಿ ಕು.ಯಮುನಾ ಉಪಸ್ಥಿತರಿದ್ದರು.ಪಶು ವೈದ್ಯಾಧಿಕಾರಿ ಡಾ.ಗಣಪತಿ ಬಿ.ಎಂ. ರವರು ಪಶುಗಳ ರಕ್ಷಣೆ ಮತ್ತು ಪೋಷಣೆ ಬಗ್ಗೆ, ಹಾಲಿನ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಕಾರ್ಯನಿರ್ವಾಹಕಿ ಬಿ.ರೇವತಿ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.

ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಸಿದ ಸಂಘದ ಸದಸ್ಯರುಗಳಾದ ಅಕ್ಷತಾರಾಣಿ, ಸುಜಾತ, ಗೀತಾ, ಲಿಜಿ ಇವರನ್ನು ಉಡುಗೊರೆ ನೀಡಿ ಗೌರವಿಸಲಾಯಿತು.2023-24ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿ ಯು.ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಹಿತು.

LEAVE A REPLY

Please enter your comment!
Please enter your name here