ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷದ ಆಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಜನ ಸಾಮಾನ್ಯರ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ ಜು.28ರಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.

ಬೆಳ್ತಂಗಡಿ ಧರ್ಮಧ್ಯಕ್ಷ ಬಿಷಪ್ ಲೋರೆನ್ಸ್ ಎಂ.ಟಿ ಅವರ ಆಶೀರ್ವಾದದೊಂದಿಗೆ ನಿರ್ದೇಶಕ ವಂದನೀಯ ಆದರ್ಶ್ ಜೋಸೆಫ್ ಪುತಿಯೇಡತ್ ರವರ ನಿರ್ದೇಶನಗಳೊoದಿಗೆ ಆಯಾ ಧರ್ಮ ಕೇಂದ್ರಗಳ ಧರ್ಮಗುರುಗಳ ಸಹಕಾರದಿಂದ, ಕೆಎಸ್ಎಂಸಿಎ ವಲಯ ಮಟ್ಟದ ಅಧ್ಯಕ್ಷರು ಹಾಗೂ ಪಧಾಧಿಕಾರಿಗಳು, ಪ್ರೈಮರಿ ಯೂನಿಟ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಎಲ್ಲಾ ಸದಸ್ಯರ ಸಹಯೋಗದಲ್ಲಿ ಮಾಜಿ ಸೈನಿಕರಿಗೆ ಗೌರವಾರ್ಪಣೆ ಮಾಡುವುದರ ಮೂಲಕ ಕಾರ್ಗಿಲ್ ವಿಜಯ ದಿವಸವನ್ನು ಆಚರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here