Site icon Suddi Belthangady

ಪೆರಾಡಿಯಲ್ಲಿ ಮನೆ ಕುಸಿತ: ಸ್ಥಳಕ್ಕೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಪೆರಾಡಿ: ಬೆಳ್ತಂಗಡಿ ತಾಲೂಕಿನಲ್ಲಿ ವಾರಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಪೆರಾಡಿ ಗ್ರಾಮದ ಕನ್ಯಾನ ಸಾರಮ್ಮ ಎಂಬ ಮಹಿಳೆಯ ಮನೆಯು ಸಂಪೂರ್ಣವಾಗಿ ಕುಸಿದು ಬಿದ್ದು ನೆಲಸಮಗೊಂಡಿದ್ದು ಈ ಕುಟುಂಬವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆ.01ರಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಶೀಘ್ರ ಪರಿಹಾರ ಕ್ರಮಗಳನ್ನು ನೀಡುವ ಭರವಸೆಯನ್ನು ನೀಡಿದರು.

ನಿಯೋಗದಲ್ಲಿ ಬದ್ರಿಯಾ ಜುಮಾ ಮಸೀದಿ ಪೆರಾಡಿ ಅಧ್ಯಕ್ಷರಾದ ಅಬ್ದುಲ್ ಸಲಾಂ ಮರೋಡಿ, ಜಮಾಅತ್ ಖತೀಬ್ ಸಫ್ವಾನ್ ಬಾಖವಿ ಮಾಪಾಲ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತಸ್ಲಿಂ, ಶರೀಫ್ ದುಗನೊಟ್ಟು, ಹಮೀದ್ ನೆಲ್ಲಿಗುಡ್ಡೆ ಮುನವ್ವರ್ ರಾಝಿಕ್ ಸೇರಿದಂತೆ ಪ್ರದೇಶದ ಪ್ರಮುಖರು ಉಪಸ್ಥಿತರಿದ್ದರು.

Exit mobile version