Site icon Suddi Belthangady

ಲಾಯಿಲದಲ್ಲಿ ಗುರಿಂಗಾನ ಸೇತುವೆ ಹಾನಿ- ಸ್ಥಳಕ್ಕೆ ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

ಲಾಯಿಲ: ಭಾರಿ ಮಳೆಯಿಂದಾಗಿ ಲಾಯಿಲ ಗ್ರಾಮದ ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ಆ.02ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ತಹಶೀಲ್ದಾರರರಿಗೆ ಕರೆ ಮಾಡಿ ಕೂಡಲೇ ಸಂಬಂಧಪಟ್ಟವರು ಭೇಟಿ ನೀಡುವಂತೆ ತಿಳಿಸಿದರು.

Exit mobile version