Site icon Suddi Belthangady

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ ಜುಲೈ 29ರಂದು ಜರಗಿತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವಿಕ್ಟರ್ ಕ್ರಾಸ್ತಾ ಮಾಜಿ ಸೈನಿಕರು ಇವರು ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಸೈನ್ಯ ಹಾಗೂ ಸೈನಿಕರ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಗಿಲ್ ಯುದ್ಧದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಒದಗಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ ರವರು ವಹಿಸಿದ್ದರು. ಎನ್ ಎಸ್ ಎಸ್ ನ ಯೋಜನಾಧಿಕಾರಿ ಪ್ರಕಾಶ್, ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ಕಾಲೇಜುನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version