Site icon Suddi Belthangady

ಆ.8-15: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಆ.9ರಿಂದ 15ರವರೆಗೆ ಸಂಜೆ 6ರಿಂದ 8ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಶ್ರೀಮದ್
ಭಾಗವತ ಪ್ರವಚನ ಸಪ್ತಾಹ ನಡೆಯಲಿದೆ.

ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡ್ವೇಟ್ನಾಯ ನೆರವೇರಿಸಲಿದ್ದಾರೆ.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಬೆಳ್ತಂಗಡಿ ರಾಘವೇಂದ್ರ ನರ್ಸಿಂಗ್ ಹೋಮ್ ನ ಡಾ.ಎಂ.ಜಗನ್ನಾಥ ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ.

ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆಯ ಪ್ರಗತಿ ಮಹಿಳಾ ಮಂಡಲ, ತುಳುಶಿವಳ್ಳಿ ಮಹಾ ಸಭಾ ಬೆಳ್ತಂಗಡಿ ತಾಲೂಕು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್, ಬೆಳ್ತಂಗಡಿ ಮಂಜುಶ್ರೀ ಜೇಸಿಐ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮೊದಲಾದ ಸಂಸ್ಥೆಗಳು ಸಹಕಾರ ನೀಡಲಿದೆ ಎಂದು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

Exit mobile version