Site icon Suddi Belthangady

ಪತ್ರಿಕಾಗೋಷ್ಠಿ- ಆ.11: ಕರ್ನಾಟಕ ವಿಧಾನ ಪರಿಷತ್ ಶಾಸಕರಾಗಿ ಆಯ್ಕೆಯಾದ ಐವನ್ ಡಿ’ಸೋಜಾರವರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಸಂಯುಕ್ತ ಕ್ರೈಸ್ತ ಸಂಘಟನೆ ವತಿಯಿಂದ ಆ.11ರಂದು ಸೇಕ್ರೆಡ್ ಹಾರ್ಟ್ ಕಮ್ಯುನಿಟಿ ಹಾಲ್ ಮಡಂತ್ಯಾರಿನಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ದ್ವಿತೀಯ ಅವಧಿಗೆ ಆಯ್ಕೆಯಾದ ಐವನ್ ಡಿ’ಸೋಜಾ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿದೆ.

ಐವನ್ ಡಿ’ಸೋಜಾರವರನ್ನು ಆಕರ್ಷಕ ಬ್ಯಾಂಡ್ ವಾದ್ಯಗಳೊಂದಿಗೆ ಸ್ವಾಗತಿಸಿ ಸನ್ಮಾನಿಸಲಾಗುವುದು ಎಂದು ಕಥೋಲಿಕ್ ಸಭಾ ಅಧ್ಯಕ್ಷ ಲಿಯೋ ರೊಡ್ರಿಗಸ್‌ ಆ.6ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ|ಲಾರೆನ್ಸ್ ಮುಕ್ಕುಜಿ ವಹಿಸಲಿದ್ದಾರೆ.

ಗೌರವ ಉಪಸ್ಥಿತಿಗಳಾಗಿ ಬೆಳ್ತಂಗಡಿ ವಲಯ ಕಥೋಲಿಕ್ ಸಭಾ ಅಧ್ಯಾತ್ಮಿಕ ನಿರ್ದೇಶಕರು ಹಾಗೂ ಬೆಳ್ತಂಗಡಿ ವಲಯದ ಪ್ರಧಾನ ಗುರುಗಳು ರೇ|ಫಾ|ಡಾ|ವಾಲ್ಟರ್ ಡಿಮೆಲ್ಲೊ ಮತ್ತು ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ ಧರ್ಮಗುರುಗಳು ಫಾ| ಡಾ| ಸ್ಟೇನಿ ಗೋವಿಯಸ್, ಬೆಳ್ತಂಗಡಿಯ ವಕೀಲ ಹಾಗೂ ಆಲ್ ಇಂಡಿಯಾನ್ ಕ್ಯಾಥೋಲಿಕ್ ಯೂನಿಯನ್‌ನ ಅಧ್ಯಕ್ಷ ಸೇವಿಯ ಪಾಲೇಲಿ ಈ ಕಾರ್ಯಕ್ರಮದಲ್ಲಿ ಅಭಿವಂದನಾ ವಾಚನ ಮಾಡಲಿರುವರು.

ಪತ್ರಿಕಾಗೋಷ್ಠಿಯಲ್ಲಿ ಚರ್ಚ್ ಪಾಲನ ಸಮಿತಿ ಬೆಳ್ತಂಗಡಿ ವಲಯದ ಕಾರ್ಯದರ್ಶಿ ಜೆರಾಲ್ಡ್ ಮೊರಾಸ್, ಕಥೋಲಿಕ್ ಸಭಾ ಕೇಂದ್ರಿಯ ಸಮಿತಿ ಅಧ್ಯಕ್ಷ ಆಲ್ವಿನ್ ಡಿಸೋಜಾ, ಕಾರ್ಯದರ್ಶಿ ಪಿಲಿಪ್ ಡಿ’ಸೋಜಾ, ಸಂಚಾಲಕ ವಿನ್ಸೆಂಟ್ ಡಿ’ಸೋಜಾ, ಐಸಿವೈಯಂ ಬೆಳ್ತಂಗಡಿ ವಲಯದ ಅಧ್ಯಕ್ಷ ಸುಪ್ರಿತ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

Exit mobile version