Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ವಿತರಣೆ

ಕಳೆಂಜ: ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1,000 ಮಾಶಾಸನವನ್ನು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರು ಮಾಡಿರುತ್ತಾರೆ ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1,000 ಮಾಶಾಸನವನ್ನು ಮಂಜೂರು ಮಾಡಿರುತ್ತಾರೆ.

ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷೆ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ರವೀಂದ್ರ ಬಿ, ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಭವಾನಿ ಹಾಗು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version