ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

0

ಮಚ್ಚಿನ: ಮಡಂತ್ಯಾರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಬಳ್ಳಮಂಜದ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಹರ್ಷ ಸಂಪಿಗೆತ್ತಾಯ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮಂಜ, ತಾಲೂಕು ಜನಜಾಗೃತಿ ಸಮಿತಿ ಸದಸ್ಯರಾದ ಗೋಪಾಲ ಕೋಲಾಜೆ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ ಪೂಜಾರಿ ಕುದ್ರಡ್ಕ, ಒಕೂಟದ ಅಧ್ಯಕ್ಷ ವಿಜಯ ಮಡಕ್ಕಿಲ, ವಲಯದ ಮೇಲ್ವಿಚಾರಕ ವಸಂತ ಕುಮಾರ್, ಸೇವಾ ಪ್ರತಿನಿಧಿ ಪರಮೇಶ್ವರ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here