Site icon Suddi Belthangady

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ

ಉಜಿರೆ: ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಉಜಿರೆ ಕಡೆಗೆ ತಿರುಗಿಸುತ್ತಿದ್ದ ಬೈಕ್ ನಡುವೆ ಅಪಘಾತವಾದ ಘಟನೆ ಆ.8ರಂದು ಸಂಜೆ ನಡೆದಿದೆ.

ಬೈಕ್ ಸವಾರ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಉಜಿರೆಯಲ್ಲಿ ಕಾಲೇಜು ಡಿವೈಡರ್ ನ ಮಧ್ಯೆ ಬೈಕ್ ತಿರುಗಿಸುವ ವೇಳೆ ಸವಾರನ ನಿಯಂತ್ರಣ ತಪ್ಪಿದ ಕಾರಣ ಹಿಂಬದಿಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version