Site icon Suddi Belthangady

ತಾಲೂಕು ಮಟ್ಟದ ಚೆಸ್ ಪಂದ್ಯಾವಳಿ

ಧರ್ಮಸ್ಥಳ: ಆಗಸ್ಟ್ 9ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ, ಪೆರಿಂಜೆ ಇಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಶ್ರೀಧ.ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ತನ್ನ ಮುಡಿಗೇರಿಸಿಕೊಳ್ಳುವುದರ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ವಿಭಾಗದಲ್ಲಿ ಆರನೇ ತರಗತಿಯ ಆರಾಧ್ಯ ಪಿ ಜೋಶಿ ನಾಲ್ಕನೇ ಸ್ಥಾನ ಹಾಗೂ ಬಾಲಕರ ವಿಭಾಗದಲ್ಲಿ 6ನೇ ತರಗತಿಯ ಸಮರ್ಥ ಭಟ್ ಪ್ರಥಮ ಸ್ಥಾನ ಹಾಗೂ ಏಳನೇ ತರಗತಿಯ ವಿದ್ವತ್ ಜೈನ್ ದ್ವಿತೀಯ ಸ್ಥಾನವನ್ನು ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರೌಢಶಾಲಾ ವಿಭಾಗದ ಬಾಲಕರ ವಿಭಾಗದಲ್ಲಿ ಹತ್ತನೇ ತರಗತಿಯ ಸುವಿತ್ ಪಿ ರಾವ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಹತ್ತನೇ ತರಗತಿಯ ಚಿನ್ಮಯ್ ರೈ ನಾಲ್ಕನೇ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version