Site icon Suddi Belthangady

ಕಾಶಿಪಟ್ಣ: ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ- ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಗಿಡ ನೆಡುವ ಕಾರ್ಯಕ್ರಮ

ಕಾಶಿಪಟ್ಣ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.11ರಂದು ಶಾಲಾ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲಾಯಿತು.

ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಇವರ ನೇತೃತ್ವದಲ್ಲಿ ಎಸ್ಡಿಎಂಸಿ ಅಧ್ಯಕ್ಷ ವಿದ್ಯಾನಂದ ಹಾಗೂ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರ ಅಕ್ತರ್ ಅಹಮದ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಕೆ ಹಾಗೂ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸಂಗಡಿ ಘಟಕದ ಸೂಪರ್ವೈಸರ್ ಆಗಿರುವ ವೀಣಾ, ಕಾಶಿಪಟ್ಣ ಗ್ರಾಮದ ಸೇವಾ ಪ್ರತಿನಿಧಿ ಶಶಿಕಲ ಹಾಗೂ ಒಕ್ಕೂಟದ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ತಂಡ ಹೊಸಂಗಡಿ ವಲಯದ ಅಧ್ಯಕ್ಷ ಸಂಜೀವ ಹಾಗೂ ಸದಸ್ಯರು, ಶಾಲಾ ಮಾತೆಯರ ಸಂಘದ ಅಧ್ಯಕ್ಷೆ ಸರಸ್ವತಿ ಹಾಗೂ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ಶ್ರಮದಾನ ಕಾರ್ಯಕ್ರಮವು ಅತ್ಯುತ್ತಮವಾಗಿ ನಡೆಯಿತು.

Exit mobile version