Site icon Suddi Belthangady

ವೇಣೂರು: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ

ವೇಣೂರು: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ವೇಣೂರು ಪಿಎಂಶ್ರೀ, ಬಜಿರೆ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 11ರಂದು ಶ್ರಮದಾನವನ್ನು ನಡೆಸಲಾಯಿತು.

ಶ್ರಮದಾನದಲ್ಲಿ ಶಾಲೆಯ ಸುತ್ತ ಮುತ್ತ ಹಣ್ಣು ಗಿಡ ನಾಟಿ ಮಾಡಲಾಯಿತು.ಕೆಲವು ಗಿಡ ಮರಗಳ ಬುಡಕ್ಕೆ ಸೊಪ್ಪು ಹಾಕುವ ಕೆಲಸ ಮಾಡಲಾಯಿತು.

ಈ ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರು ಭಾಗವಹಿಸಿದರು. ತಾಲೂಕಿನ ಕೃಷಿ ಅಧಿಕಾರಿ ಕೃಷ್ಣ ಸರ್ ಹಾಗೂ ವಲಯದ ಮೇಲ್ವಿಚಾರಕಿ ಶಾಲಿನಿ ಉಪಸ್ಥಿತರಿದ್ದರು.ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಶಾಲೆಯ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿದರು.ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲೆಯ ಕಮಿಟಿ ಅಧ್ಯಕ್ಷ ದಿನೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು.

Exit mobile version