ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬೆಳ್ತಂಗಡಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ

0

ಬೆಳ್ತಂಗಡಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬೆಳ್ತಂಗಡಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಆ.12ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಮಾನವ ಸರಪಳಿಯ ಮೂಲಕ ಬಂದು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರಿನಿವಾಸ ರಾವ್, ಪ್ರ.ಕಾರ್ಯದರ್ಶಿ ಜಯಾನಂದ ಗೌಡ, ವಿಶ್ವ ಹಿಂದೂ ಪರಿಷತ್ ನ ನವೀನ್ ನೆರಿಯ,ರೈತಾ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ವಕೀಲ ಅನಿಲ್ ಕುಮಾರ್, ಸಂತೋಷ್ ಕಾಪಿನಡ್ಕ, ರವಿ ಕುಮಾರ್ ಬರಮೇಲು, ವಿಶ್ವನಾಥ್ ಹೊಳ್ಳ, ರಾಘವ ಕಲ್ಮಂಜ, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಹಿಂದೂ ಸಂಘಟನೆಯ ಮುಖ್ಯಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here