Site icon Suddi Belthangady

ಬೆಳಾಲು ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದಿಂದ ಶ್ರದ್ದಾ ಕೇಂದ್ರದ ಸ್ವಚ್ಛತೆ

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯ ಅಂಗವಾಗಿ ಆ.11ರಂದು ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ವಠಾರವನ್ನು ಬೆಳಾಲು ಮಾಯ ಒಕ್ಕೂಟದ ಸದಸ್ಯರು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.

ದೇವಸ್ಥಾನದ ವ್ಯವಸ್ಥಾಪಕ ಶೇಖರ ಗೌಡ ಕೊಲ್ಲಿಮಾರು, ಒಕ್ಕೂಟದ ಮಾಜಿ ಅಧ್ಯಕ್ಷ ಶಿವಪ್ಪ ಗೌಡ, ನವಜೀವನ ಸಮಿತಿ ಸದಸ್ಯ ಬಿರ್ಮಣ ಪೂಜಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಲಲಿತ ಮೋನಪ್ಪ ಗೌಡ, ಒಕ್ಕೂಟದ, ಜ್ಞಾನ ವಿಕಾಸ, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

Exit mobile version