ಬೆಳ್ತಂಗಡಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನ

0

ಬೆಳ್ತಂಗಡಿ: ಸರ್ಕಾರದ ಆದೇಶದಂತೆ ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಚೇರಿವರೆಗೆ ಕಾಲ್ನಡಿಗೆ ಜಾಥಾಕ್ಕೆ ತಾಲೂಕಿನ ದಂಡಾಧಿಕಾರಿ ಪೃಥ್ವಿ ಸಾನಿಕಮ್ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ಭವಾನಿಶಂಕರ್ ಮಾತನಾಡಿ ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಚೇರಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು.

ಆದ್ದರಿಂದ ನಾಳೆ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ, ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ ಎಂದರು.

ಜಾಥ ನಡೆದ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಮಕ್ಕಳು, ಶಾಲಾ ಶಿಕ್ಷಕರು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here