ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

0

ನಿಡ್ಲೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ರಮೇಶ್ ರಾವ್ ಕಾಯಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಪದ್ಮನಾಭ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ನಿಡ್ಲೆ ಸಹಕಾರಿ ಸಂಘದ ಉಪಾಧ್ಯಕ್ಷ ರುಕ್ಕಯ್ಯ ಪೂಜಾರಿ ಪಿ., ನಿರ್ದೇಶಕರಾದ ಅಶೋಕ್ ಭಟ್, ಸೆಬಾಸ್ಟಿಯನ್ ಪಿ.ಟಿ, ಡೀಕಯ್ಯ ಎಮ್.ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ., ವಿಜಯಲಕ್ಷ್ಮೀ, ಐಶ್ವರ್ಯ ಶೆಟ್ಟಿ ಜೆ., ಕೆಂಪಯ್ಯ ಗೌಡ ಎನ್‌., ರಾಜು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here