Site icon Suddi Belthangady

ಗುರುವಾಯನಕೆರೆ: ವಿಜಯ ಕ್ರೆಡಿಟ್.ಕೊ.ಆಫ್ ಸೊಸೈಟಿಗೆ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಮಾಡಿದ ಸಾಧನೆಗಾಗಿ ಗುರುವಾಯನಕೆರೆ ವಿಜಯ ಕ್ರೆಡಿಟ್.ಕೊ.ಆಫ್ ಸೊಸೈಟಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಉಪಾಧ್ಯಕ್ಷ ಎಂ.ಜಿ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ರವರಿಗೆ ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಂಘದ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ ಹಾಗೂ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Exit mobile version