Site icon Suddi Belthangady

ಬೆಳ್ತಂಗಡಿ: ನ್ಯಾಯಾಲಯದ ಸಂಕೀರ್ಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವೀಜಯೇಂದ್ರ ಟಿ. ಹೆಚ್., ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ., ಹಿರಿಯ ಸಮಿತಿ ಅಧ್ಯಕ್ಷ ಆಲೋಶಿಯಸ್ ಎಸ್.ಲೋಬೊ, ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ, ಎ ಪಿ ಪಿ ಗಳು, ಅಪರ ಸರಕಾರಿ ವಕೀಲ ಮನೋಹರ ಕುಮಾರ್ ಎ.
ಇತರ ವಕೀಲರು, ನ್ಯಾಯಾಲಯ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version