Site icon Suddi Belthangady

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಆಮಂತ್ರಣ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಆ.6ರಿಂದ 8ರವರೆಗೆ ನಡಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಆ.15ರಂದು ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆಯನ್ನು ಖ್ಯಾತ ಪ್ರವಚನಕಾರರಾದ ವೀಣಾ ಬನ್ನಂಜೆ ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ವೇಣುಗೋಪಾಲ್ ತಂತ್ರಿ, ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷರು, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಸಮಿತಿ ಸದಸ್ಯರು ಹಾಜರಿದ್ದರು.

ಉಪನ್ಯಾಸಕ ಶ್ರೀಶ ಕೆರ್ಮುಣ್ಣಾಯ ಕಾರ್ಯಕ್ರಮ ನಿರ್ವಹಿಸಿದರು.

Exit mobile version