Site icon Suddi Belthangady

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬಳಂಜ: ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ನಡೆಯಿತು.

ಮಹಿಳೆಯರು, ಮುತ್ತೈದೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಕ್ಷೇತ್ರಕ್ಕೆ ಹೋಗುವ ಸಂಪರ್ಕ ರಸ್ತೆಯು ಮಳೆಗಾಲದಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು ಭಕ್ತರು ನಡೆದುಕೊಂಡು ಬಂದು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಯ ಸಾಲಿಯಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ.

Exit mobile version