ಕಕ್ಕೆಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಆಚರಣೆ

0

ಕಕ್ಕೆಪದವು: ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವು ದೇಶಭಕ್ತಿ ಗೀತೆಯನ್ನು ಹಾಡುವುದರ ಮೂಲಕ ಆರಂಭಿಸಲಾಯಿತು.

ಶಾಲಾ ಸಂಚಾಲಕ ಬಬಿತ ಆರ್ ನಾಥ್ ರ ಮುಂದಾಳತ್ವದಲ್ಲಿ ಕಾರ್ಯದರ್ಶಿ ಶಿವಾನಿ ಆರ್ ನಾಥ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ನಮ್ಮ ರಾಷ್ಟ್ರಕ್ಕೆ ಗೌರವವನ್ನು ಸಲ್ಲಿಸಲಾಯಿತು. ದೈಹಿಕ ಶಿಕ್ಷಕಿ ಘೋಷವಾಕ್ಯ ಹೇಳುವುದರ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಿಜಯಾ ಕೆ. ಭಾಗವಹಿಸಿದರು. ಬೋಧಕ ಬೋಧಕೇತರ ವರ್ಗದವರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜು ವಿಭಾಗದ ಉಪನ್ಯಾಸಕಿ ವಿಂಧ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here