ಧರ್ಮಸ್ಥಳ: ಚಂದ್ರಗಿರಿ ನಗರ ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

0

ಧರ್ಮಸ್ಥಳ: ಚಂದ್ರಗಿರಿ ನಗರ ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 78ನೆ ವರ್ಷದ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.ದ್ವಜರೋಹಣವನ್ನು ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ರಾಜೇಶ್ ಕೂಟದಕಲ್ಲುರವರು ನೆರವೇರಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳದ ಜಮಾ ಉಗ್ರಾಣ ಮಾಜಿ ಮುತ್ಸದ್ದಿ ಹಾಗೂ ಕಲಾ ಪೋಷಕರಾದ ಬಿ ಭುಜಬಲಿ, ಉದ್ಯಮಿ ಶುಭಾಶ್ ಚಂದ್ರ ಜೈನ್, ಸಮಿತಿ ಅಧ್ಯಕ್ಷರಾದ ರೇವತಿ, ಸ್ತ್ರೀಶಕ್ತಿ ಸಂಘದ ಸದಸ್ಯರು, ಊರಿನ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂದ್ಯಾರವರು ಸ್ವಾತಂತ್ರ್ಯ ಗೀತೆಯನ್ನು ಹಾಡಿದರು.ರಾಜೇಶ್ ರವರನ್ನು ಬಾಲವಿಕಸ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು, ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಮಕ್ಕಳ ಪೋಷಕರು ಸಿಹಿ ತಿಂಡಿಗಳನ್ನು ನೀಡಿದರು, ಸುರೇಶ್ ಗೌಡ ಬೆಳಗ್ಗಿನ ಉಪಹಾರದ ವ್ಯವಸ್ಥೆಯನ್ನು ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಬಿಂದು ಸ್ವಾಗತಿಸಿದರು.

LEAVE A REPLY

Please enter your comment!
Please enter your name here