ಕಕ್ಯಪದವು: ಎಲ್. ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ‘ತುಳುವರ ಬದುಕಿನ ಅನಾವರಣ’ ಎಂಬ ಪರಿಕಲ್ಪನೆಯಲ್ಲಿ ಆಟಿಡೊಂಜಿ ದಿನ

0

ಕಕ್ಯಪದವು: ಉಳಿ ಗ್ರಾಮದ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಕೆಪದವು ಆ.15ರಂದು “ತುಳುವರ ಬದುಕಿನ ಅನಾವರಣ ” ಎಂಬ ಪರಿಕಲ್ಪನೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಿ ತರಗತಿವಾರು ಸ್ಪರ್ಧೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಬಬಿತಾ ಆರ್.ನಾಥ್ ಹಾಗೂ ಕಾರ್ಯದರ್ಶಿ ಶಿವಾನಿ ಆರ್ ನಾಥ್ ದೀಪ ಬೆಳಗಿಸಿ ಉದ್ಘಾಟಿಸಿ ಆಟಿಕಳೆಂಜನ ಕುಣಿತದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಹರಿಶ್ಚಂದ್ರ ಪೂಜಾರಿ ಕೇರ್ಯ ಉದ್ಯಮಿಗಳು, ಗುರುಪ್ರಕಾಶ್ ಕೊರಡಿಂಗೇರಿ, ಲೆಕ್ಕ ಪರಿಶೋಧಕರು ಉಳಿ ಸೇವಾ ಸಹಕಾರಿ ಬ್ಯಾಂಕ್ ಕಕ್ಯ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ , ಸಂಯೋಜಕ ಯಶವಂತ್ ಜಿ.ನಾಯಕ್ ಪ್ರಾಥಮಿಕ ಮತ್ತು ಪೌಢ ವಿಭಾಗದ ಮುಖ್ಯಶಿಕ್ಷಕಿ ಕು.ವಿಜಯಾ.ಕೆ ಉಪಸ್ಥಿತರಿದ್ದರು.

ಕಾಲೇಜು ವಿಭಾಗದ ಉಪನ್ಯಾಸಕಿ ವಿಂದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಹಿಂದಿನ ಕಾಲದ ತುಳುವರ ಬದುಕಿನ ಅನಾವರಣದೊಂದಿಗೆ ಸಂಸ್ಕೃತಿ ಸಾಂಪ್ರದಾಯಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ತುಳುನಾಡಿನ ವಿಶೇಷ ಖಾದ್ಯಗಳನ್ನು, ಔಷಧೀಯ ಗಿಡಮೂಲಿಕೆಗಳನ್ನು ಹಾಗೂ ಹಳೆಯ ಕಾಲದ ವಸ್ತುಗಳನ್ನು ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here