ಸಾಮ್ರಾಟ್ ಶಿಲ್ಪಕಲಾ ಸಂಸ್ಥೆಯ ಮಾಲಕ ಪ್ರಸಾದ್ ಆಚಾರ್ಯರವರಿಂದ ಬಡಗಕಾರಂದೂರು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

0

ಅಳದಂಗಡಿ: ಮಿತ್ತರೋಡಿ ಬಳಿಯ ಸಾಮ್ರಾಟ್ ಶಿಲ್ಪಕಲಾ ಸಂಸ್ಥೆಯ ಮಾಲಕ ಪ್ರಸಾದ್ ಆಚಾರ್ಯ ಮಾಳ ಬಜಗೋಳಿ ಇವರು ಈ ದಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶಶಿಕಾಂತ್ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಎನ್, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಪ್ರಸಾದ್ ಆಚಾರ್ಯರವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here