Site icon Suddi Belthangady

ಉಜಿರೆ: ಎಸ್ ಡಿ ಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ನೆನಪಿನಂಗಳ ಕಾರ್ಯಕ್ರಮ ಸಮಾಲೋಚನಾ ಸಭೆ

ಉಜಿರೆ: ಉಜಿರೆ ಕಾಲೇಜಿನ ಇಂದ್ರಪ್ರಸ್ಥ ಒಳ ಕ್ರೀಡಾಂಗಣದಲ್ಲಿ ಆ.24ರಂದು ನಡೆಯಲಿರುವ ಹಿರಿಯ ವಿದ್ಯಾರ್ಥಿಗಳ ನೆನಪಿನಂಗಳ ವಾರ್ಷಿಕ ಮಹೋತ್ಸವದ ಕಾರ್ಯಕ್ರಮದ ಪೂರ್ವಭಾವಿ ಸಭೆ ಎಸ್ ಡಿ ಎಮ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು

ಕಾರ್ಯದರ್ಶಿ ಹಿರಿಯ ವಕೀಲ ಧನಂಜಯ ರಾವ್ ಸಮಾರಂಭದ ಉದ್ದೇಶ ಮತ್ತು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗಡೆ ಅಂದು ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿಗಳ ಅಧ್ಯಕ್ಷ ಪೀತಾಂಬರ ಹೇರಾಜೇ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮವನ್ನು ಹೆಚ್ಚಿನ ಸದಸ್ಯರ ಕೂಡುವಿಕೆಯಿಂದ ಯಶಸ್ವಿಗೊಳಿಸೋಣ ಎಂದರು. ಮುಖ್ಯ ಸಂಯೋಜಕ ಎಂ.ಪಿ ಶ್ರೀನಾಥ್ ವಂದಿಸಿದರು.

Exit mobile version