Site icon Suddi Belthangady

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ

ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಭವನದಲ್ಲಿ ಜರಗಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು.

ವರ್ತಕರ ಸಂಘದ ಸಲಹೆಗಾರ ಪದ್ಮನಾಭ ಶೆಟ್ಟಿಗಾರ ಪದ್ಮಶ್ರೀ ಕಾರ್ಯಕ್ರಮಕ್ಕೆ ತೆಂಗಿನ ಸಿರಿ ಅರಳಿಸಿ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಪೊಲೀಸ್ ಸಂಚಾರ ಠಾಣಾ ಸಬ್ ಇನ್ಸ್ಪೆಕ್ಟರ್ ಅರ್ಜುನ್, ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ, ಉಜಿರೆ ಸೈಂಟ್ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಮಾಲಕ ಆಂಟನಿ ಟಿ.ಆರ್. ಉಜಿರೆ ಶ್ರೀ ಧನಲಕ್ಷ್ಮೀ ಜ್ಯುವೆಲರ್ಸ್ ಮಾಲಕ ಕೆ. ರಮೇಶ್ ಕುಮಾರ್, ಉಜಿರೆ ಭಾರತ್ ಫೂಟ್ ವೇರ್ ಮಾಲಕ ಅಬ್ಬಾಸ್ ಮೊಹಮ್ಮದ್, ಉಜಿರೆ ದಿಶಾ ಫುಡ್ ಕಾರ್ನರ್ ಮಾಲಕ ಅರುಣ ಸಮೃದ್ಧಿ ಟ್ರೇಡರ್ಸ್ ಮಾಲಕ ಇಬ್ರಾಹಿಂ ಭಾಗವಹಿದ್ದರು.

ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ್ ಕಾರಂತ, ಕಾರ್ಯದರ್ಶಿ ಲಕ್ಷ್ಮಣ ಗೌಡ, ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ವರ್ತಕರ ಸಂಘದ ಕೋಶಾಧಿಕಾರಿ ಅಬೂಬಕ್ಕರ್ ಸ್ವಾಗತಿಸಿ, ಜತೆ ಕಾರ್ಯದರ್ಶಿ ಬಿ. ಎಸ್. ಪ್ರಸಾದ್ ವಂದಿಸಿದರು. ಬಳಿಕ ವಿವಿಧ ಮನೋರಂಜನೆ, ಆಟೋಟ ಸ್ಪರ್ಧೆಗಳು ನಡೆಯಿತು.

Exit mobile version