Site icon Suddi Belthangady

ಶಾಸಕ ಹರೀಶ್ ಪೂಂಜ, ಬಿಜೆಪಿ ಪ್ರಮುಖರು ಶ್ರೀ ರಾಮ ಕ್ಷೇತ್ರ ಕರಿಕಲ್ ಶಾಖಾ ಮಠಕ್ಕೆ ಭೇಟಿ- ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಾದ

ಬೆಳ್ತಂಗಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತವನ್ನು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಆಚರಿಸುತ್ತಿದ್ದು, ಆ.18ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಭಾರತೀಯ ಜನತಾ ಪಕ್ಷದ ಪ್ರಮುಖರಾದ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್, ಮಂಡಲದ ಉಪಾಧ್ಯಕ್ಷ ಮೋಹನ ಅಂಡಿಂಜೆ, ವೇಣೂರು ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ, ವೇಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನೇಮಯ್ಯಕುಲಾಲ್, ಮಾಜಿ ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ, ಪ್ರಮುಖರಾದ ಕಿರಣ್ ಮಂಜಿಲ, ಉದಯ ಹೆಗ್ಡೆ ನಾರಾವಿ, ಮಾಧವ ಶಿರ್ಲಾಲ್, ಅಭಿಜಿತ್ ಜೈನ್, ಸುಂದರ ಭಂಡಾರಿ ಅಂಡಿಂಜೆ, ನಿರ್ಮಲ್ ಕುಮಾರ್ ಕುಕ್ಕೇಡಿ ಮೊದಲದವರು ಭಾಗವಹಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.ಸ್ವಾಮೀಜಿ ಇವರನ್ನು ಗೌರವಿಸಿದರು.

Exit mobile version