Site icon Suddi Belthangady

ಇಂದಬೆಟ್ಟು ವಲಯದ ಗುರಿಪಳ್ಳ ಒಕ್ಕೂಟದಿಂದ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಗುರಿಪಳ್ಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇಂದಬೆಟ್ಟು ವಲಯದ, ಗುರಿಪಳ್ಳ ಒಕ್ಕೂಟದ ವತಿಯಿಂದ ಆ.11ರಂದು ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಸುಮಾರು 60 ಜನ ಸದಸ್ಯರು ಆಗಮಿಸಿ ದೇವಸ್ಥಾನದಲ್ಲಿ ವಿವಿಧ ಸ್ವಚ್ಚತಾ ಕಾರ್ಯಗಳನ್ನು ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ದೇವಸ್ಥಾನದ ಅರ್ಚಕ ಶ್ರೀ ಸತ್ಯನಾರಾಯಣ ಹೊಳ್ಳ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಯಶೋಧರ ಗೌಡ, ವಲಯದ ಮೇಲ್ವಿಚಾರಕಿ ಉಷಾ, ಸೇವಾ ಪ್ರತಿನಿಧಿ ಪುಷ್ಪ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version