Site icon Suddi Belthangady

ಬೆಳ್ತಂಗಡಿ: ಗುರುದೇವ ಕಾಲೇಜಿನಲ್ಲಿ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಇದರ ಆಶ್ರಯದಲ್ಲಿ ರವಿ ರಾಮ ಶೆಟ್ಟಿರವರ ನೇತೃತ್ವದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ಆ.17ರಂದು ಗುರುದೇವ ಕಾಲೇಜಿನಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ವಹಿಸಿದ್ದರು. ಗುರುದೇವ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಸವಿತಾ ಉದ್ಘಾತಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಕ ನಿರ್ದೇಶಕ ರವಿರಾಮ್ ಶೆಟ್ಟಿ, ಎಸ್ ಡಿ ಎಂ ವಸತಿ ಪದವಿಪೂರ್ವ ಕಾಲೇಜು ಉಜಿರೆ ಇಲ್ಲಿನ ದೈಹಿಕ ಶಿಕ್ಷಕ ನಿರ್ದೇಶಕ ಲಕ್ಷ್ಮಣ್ ಉಪಸ್ಥಿತರಿದ್ದರು.

ಕಾಲೇಜಿನ ಉಪ ಪ್ರಾಂಶುಪಾಲ ಬಿ.ಎ.ಶಮಿಯುಲ್ಲಾ ಸ್ವಾಗತಿಸಿ, ಕನ್ನಡ ಉಪನ್ಯಾಸಕ ರಾಕೇಶ್ ಕುಮಾರ್ ಮುಡುಕೋಡಿ ಕಾರ್ಯಕ್ರಮ ನಿರೂಪಿಸಿದರು. ರವಿರಾಮ ಶೆಟ್ಟಿ ವಂದಿಸಿದರು.

ಪಂದ್ಯಾಟದ ಫಲಿತಾಂಶ: ಬಾಲಕರ ವಿಭಾಗದಲ್ಲಿ ಉಜಿರೆ ಎಸ್ ಡಿ ಎಂ ವಸತಿ ಪ.ಪೂ.ಕಾಲೇಜು ಪ್ರಥಮ, ಶ್ರೀ ಗುರುದೇವ ಪ. ಪೂ. ಕಾಲೇಜು ದ್ವಿತೀಯ, ಬಾಲಕಿಯರ ವಿಭಾಗ: ಶ್ರೀ ಗುರುದೇವ ಪ.ಪೂ.ಕಾಲೇಜು ಪ್ರಥಮ, ಪ್ರಸನ್ನ ಪ.ಪೂ.ಕಾಲೇಜು ದ್ವಿತೀಯ.

Exit mobile version