ಬೆಳ್ತಂಗಡಿ: ದೇವರಾಜು ಅರಸುರವರ 109ನೇ ಜನ್ಮದಿನಾಚರಣೆ

0

ಬೆಳ್ತಂಗಡಿ: ತಾಲೂಕು ಆಡಳಿತ, ತಾ.ಪಂ., ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇದರ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ ಆ.20ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಿಂದ ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ ವಿತರಿಸಿದರು.

ವೇದಿಕೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಜಯರಾಮ್, ತಾ.ಪಂ.ಇಓ ಭವಾನಿಶಂಕರ್, ಬಿಓ ತಾರಕೇಸರಿ ಹಾಗೂ ದೇವಾರಜು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್ ಉಪಸ್ಥಿತರಿದ್ದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಸ್ವಾಗತಿಸಿದರು. ಶೇಷಗಿರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here