ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ- ಧಾರ್ಮಿಕ ಸಭೆ

0

ಬೆಳ್ತಂಗಡಿ: ಲಾಯಿಲ ಶ್ರೀರಾಘವೇಂದ್ರ ಸೇವಾ ಪ್ರತಿಷ್ಠಾನಾ ವತಿಯಿಂದ ನಡೆಯುತ್ತಿರುವ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ ಆ.21ರಂದು ಜರಗಿತು. ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನಾದ ಅಧ್ಯಕ್ಷ ನಿವೃತ್ತ ಎಸ್.ಪಿ.ಪೀತಾಂಬರ ಹೇರಾಜೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ, ಭಾಗವಹಿಸಿದ್ದರು. ಕ್ಷೇತ್ರದ ಭಕ್ತ ಬೆಂಗಳೂರಿನ ಉದ್ಯಮಿ ನಾರಾಯಣ ಬೇಗೂರು, ದಾನಿಗಳಾದ ದಿನೇಶ್ ಕುಂದಾಪುರ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರನ್ನು ಗೌರವಿಸಲಾಯಿತು.ಗೌರವ ಸಲಹೆಗಾರ ಉಜಿರೆ ಶ್ರೀ ಧ.ಮ.ಕಾಲೇಜು ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ ಪ್ರಸ್ತಾವನೆಗೈದರು.ಟ್ರಷ್ಟಿ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎ.ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು.

ಗೌರವ ಸಲಹೆಗಾರ ಸುದ್ದಿ ಬಿಡುಗಡೆಯ ಮೆನೇಜರ್ ಮಂಜುನಾಥ ರೈ ಸಂದೇಶ ವಾಚಿಸಿದರು. ಉತ್ಸವ ಸಮಿತಿಯ ಸಂಚಾಲಕ ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.ಟ್ರಷ್ಟಿನ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಕೋಶಾಧಿಕಾರಿಯಾಗಿದ್ದ ಶೇಖರ ಬಂಗೇರ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here