Site icon Suddi Belthangady

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಉಜಿರೆ ಗ್ರಾಮದ ಬಾಬು ಮುಗೇರ ಇವರ ಪುತ್ರ ಸುರೇಶ್(40ವ)ರವರು ಮಧ್ಯಾಹ್ನ ಯಾರು ಇಲ್ಲದ ಸಮಯದಲ್ಲಿ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಬಾಗದ ಅಶ್ವಥಕಟ್ಟೆ ಹತ್ತಿರ ನಿರ್ಮಾಣ ಹಂತದಲ್ಲಿರುವ ಇರುವ ಮನೆಯ ಕೋಣೆಯ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗಸ್ಟ್ 21ರಂದು ನಡೆದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಮೃತರು ತಾಯಿ ಗುಲಾಬಿ ಅವರನ್ನು ಅಗಲಿದ್ದಾರೆ.

Exit mobile version