ವೇಣೂರು: ಅವಿವಾಹಿತ ನೇಣು ಬಿಗಿದು ಆತ್ಮಹತ್ಯೆ

0

ವೇಣೂರು: ನಿಟ್ಟಡೆ ಗ್ರಾಮದ ಬೂತೆರ್ ನಿವಾಸಿ ಪುತ್ರ ಸತೀಶ್ ಪೂಜಾರಿ(36ವ)ರವರು ಬೆಳಗ್ಗೆ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗಸ್ಟ್ 21ರಂದು ನಡೆದಿದೆ.

ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆತ್ಮಹತ್ಯೆಗೆ ಕಾರಣ ನಿಗೂಢ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಮೃತರು ತಾಯಿ ಕೃಷ್ಣಮ್ಮ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here