ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶ ಭಕ್ತಿ ಗಾಯನ ಸ್ಪರ್ಧೆ

0

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿಯವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು‌ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಎನ್.ಶೆಟ್ಟಿ ನೆರವೇರಿಸಿ ಮಾತನಾಡಿ ಲಯನ್ಸ್ ಕ್ಲಬ್ ನಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೂಡ ಒಂದು ಸೇವಾ ಮನೋಭಾವದ ಸಂಸ್ಥೆಯಾಗಿದೆ. ಜಂಟಿ ಆಶ್ರಯದಲ್ಲಿ ಸ್ಕೌಟ್ ಗೈಡ್ ನೊಂದಿಗೆ ಸಹಭಾಗಿತ್ವ ವಹಿಸಿರುವುದು ಪುಣ್ಯದ ಕೆಲಸವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ವೆಂಕಟೇಶ್ ಹೆಬ್ಬಾರ್, ಉಮೇಶ್ ಶೆಟ್ಟಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಅಧ್ಯಕ್ಷ ಎಚ್.ಪದ್ಮಕುಮಾರ್ ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ, ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಬ್ ವಿಭಾಗದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ದ್ವಿತೀಯ, ವಾಣಿ ಆಂಗ್ಲ ಮಾಧ್ಯಮ ಶಾಲೆ ತೃತೀಯ, ಬುಲ್ ಬುಲ್ ವಿಭಾಗದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಮೊದಲ ಸ್ಥಾನ, ‌ ಎಸ್.ಡಿ.ಎಂ ಸಿ.ಬಿ.ಎಸ್.ಸಿ ಉಜಿರೆ ದ್ವಿತೀಯ, ಎಸ್ ಡಿ ಎಂ ಧರ್ಮಸ್ಥಳ ತೃತೀಯ, ಗೈಡ್ ವಿಭಾಗದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮೊದಲ ಸ್ಥಾನ, ಎಸ್.ಡಿ.ಎಂ ಬೆಳ್ತಂಗಡಿ ದ್ವಿತೀಯ, ಸೈಂಟ್ ಮೇರಿಸ್ ಲಾಯಿಲ ತೃತೀಯ, ಸ್ಕೌಟ್ ವಿಭಾಗದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮೊದಲ ಸ್ಥಾನ, ಎಸ್ ಡಿ ಎಂ ಧರ್ಮಸ್ಥಳ ದ್ವಿತೀಯ, ಎಸ್ ಡಿ ಎಂ ಸಿ ಬಿ ಎಸ್ ಸಿ ಉಜಿರೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ತೀರ್ಪುಗಾರರಾಗಿ ನಾಗೇಂದ್ರ ನಾಯಕ್ ಉಜಿರೆ, ಸಂಗೀತ ಶಿಕ್ಷಕರು ಹಾಗೂ ಮಮತ ಕಲ್ಲಡ್ಕ ಸಹಕರಿಸಿದರು.

ನಡ ಪ.ಪೂ. ಕಾಲೇಜು ರೇಂಜರ್ ಲೀಡರ್ ಸ್ವಾಗತಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೋಶಾಧಿಕಾರಿ ಬೆಳಿಯಪ್ಪ ಕೆ ವಂದಿಸಿದರು. ಹಿರಿಯರಾದ ಭುಜಬಲಿ, ವಸಂತ್ ಶೆಟ್ಟಿ, ಚಂದ್ರಹಾಸ ಬಳ್ಳಂಜ, ಬನ್ನಿಸ್ ಲೀಡರ್ಸ್ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಫ್ಲಾಕ್ ಲೀಡರ್ಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here