Site icon Suddi Belthangady

ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಉಪಾಧ್ಯಕ್ಷರಾಗಿ ಚಂದ್ರಶೇಖರ ಎಂ. ಮರು ಆಯ್ಕೆ- ನೂತನ ಸಮಿತಿಗೆ ತಾಲೂಕಿನ ಐದು ಮಂದಿ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಧ್ವನಿ ವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಸಂಘದ ಅಧ್ಯಕ್ಷ ಚಂದ್ರಶೇಖರ ಎಂ. ಮರು ಆಯ್ಕೆಯಾಗಿದ್ದಾರೆ ಹಾಗೂ ತಾಲೂಕಿನ 5 ಮಂದಿ ಸದಸ್ಯರು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಗೆ ಬೆಳ್ತಂಗಡಿಯ ವಲಯದ ಐದು ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಅಧ್ಯಕ್ಷ ಚಂದ್ರಶೇಖರ ಎಂ, ಉಪ ಕಾರ್ಯದರ್ಶಿಯಾಗಿ ಬೆನಕ ಸೌಂಡ್ಸ್ ನ ಮಾಲಕ ವಸಂತ ನಾವೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂಜೀವ ಬಿ.ಎಚ್ ಸಂಜಯ ಸೌಂಡ್ಸ್, ನಾರಾಯಣ ಗೌಡ ನಿಶ್ಮಿತಾ ಸೌಂಡ್ಸ್, ಜಿಲ್ಲಾ ಗೌರವ ಸಲಹೆಗಾರರಾಗಿ ತಾಲ್ಲೂಕಿನ ಉಪಾಧ್ಯಕ್ಷ ಜೋಸೆಫ್ ಕೆ.ಡಿ ಆಯ್ಕೆಯಾದರು.

Exit mobile version