Site icon Suddi Belthangady

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ ಕೃಷ್ಣವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜುವೆಲ್ಸ್‌ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.31ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲಕೃಷ್ಣ 4-7 ವರ್ಷ, ರಾಧಾಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಣಿಗೆ ಆಗಸ್ಟ್ 29 ಕೊನೆಯ ದಿನಾಂಕ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ನೋಂದಣಿ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತಿ ವಿಭಾಗದಲ್ಲೂ ಸ್ಪರ್ಧಿಗಳಿಗೆ ೧1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರಬೇಕು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲ ಸ್ಪರ್ಧಿಗಳ ಫೋಟೋ/ವಿಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್‌ನಲ್ಲಿ ಹಾಕಲಾಗುವುದು.

Exit mobile version