Site icon Suddi Belthangady

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಆ.23ರಂದು ಬೆಳ್ತಂಗಡಿ ಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು.

ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಲಲಿತ ಸಹಸ್ರನಾಮ, ಶ್ರೀ ದೇವೀ ಅಷ್ಟೋತ್ತರ ಪಾರಾಯಣ ಹಾಗೂ ಭಜನಾ ಕಾರ್ಯಕ್ರಮ ಜರಗಿತು.

ಮಹಿಳಾ ವೇದಿಕೆ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಅಧ್ಯಕ್ಷೆ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ., ಮಾಜಿ ಅಧ್ಯಕ್ಷರಾದ ವಿನೋದಿನಿ ರಾಮಪ್ಪ, ರಾಜಶ್ರೀ ರಮನ್, ತನುಜಾ ಶೇಖರ್, ಪ್ರೇಮಾ ಉಮೇಶ್, ಸುಜಾತ ಅಣ್ಣಿ ಪೂಜಾರಿ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್, ಉಪಾಧ್ಯಕ್ಷ ಸುಂದರ ಪೂಜಾರಿ ಹಾಗೂ ಎಲ್ಲ ಪದಾಧಿಕಾರಿ, ನಿದೇಶಕರು ಭಾಗವಹಿಸಿದ್ದರು.

Exit mobile version