Site icon Suddi Belthangady

ಉಂಬೆಟ್ಟು ಸ.ಉ.ಪ್ರಾ. ಶಾಲೆಗೆ ಧರ್ಮಸ್ಥಳದಿಂದ ರೂ. 1ಲಕ್ಷ ದೇಣಿಗೆ

ವೇಣೂರು: ವೇಣೂರು ವಲಯದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಉಂಬೆಟ್ಟು ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಶ್ರೀ ಕ್ಷೇತ್ರದಿಂದ ಧರ್ಮಸ್ಥಳದಿಂದ ಡಾ.ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದು ಇದನ್ನು ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಧನಂಜಯ ಜೈನ್, ಶಾಲೆಯ ಮುಖ್ಯೋಪಾಧ್ಯಾಯ ವಿನೋದ ಮತ್ತು ಶಿಕ್ಷಕ ವೃಂದದವರು ವೇಣೂರು ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ,ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ, ಸದಸ್ಯೆ ವೀಣಾ, ವಲಯದ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ಸುನೀತಾ ಒಕ್ಕೂಟದ ಅಧ್ಯಕ್ಷೆ ನಳಿನಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version